N

ಹಣ್ಣು ಮಾರುವವನ ಹಾಡು

ನಂಜನಗೂಡಿನ ರಸಬಾಳೆ, ತಂದಿಹೆ ಕೊಡಗಿನ ಕಿತ್ತೀಳೆ

ಹಣ್ಣು ಮಾರುವವನ ಹಾಡು

The poem "hannu maaruvavana haadu" (fruit seller's song) is one of famous poems in Kannada language. This poem mentions various fruits associated with its places in Karnataka. This poem is also present in school curriculum.
---------------
ನಂಜನಗೂಡಿನ ರಸಬಾಳೆ
ತಂದಿಹೆ ಕೊಡಗಿನ ಕಿತ್ತೀಳೆ
ಬೀದರ ಜಿಲ್ಲೆಯ ಸೀಬೆಯ ಹಣ್ಣು
ಬೆಂಗಳೂರಿನ ಸೇಬಿನ ಹಣ್ಣು

ಕೊಳ್ಳಿರಿ ಹಿಗ್ಗನು ಹರಿಸುವವು
ಕಲ್ಲುಸಕ್ಕರೆಯ ಮರೆಸುವವು

ಕೊಳ್ಳಿರಿ ಮಧುಗಿರಿ ದಾಳಿಂಬೆ
ಬೆಳವಲ ಬಯಲಿನ ಸಿಹಿಲಿಂಬೆ
ಬೆಳಗಾವಿಯ ಸವಿ ಸಪೋಟ
ದೇವನಹಳ್ಳಿಯ ಚಕ್ಕೋತ

ನಾಲಿಗೆ ಬರವನು ಕಳೆಯುವವು
ದೇಹದ ಬಲವನು ಬೆಳೆಸುವವು

ಗಂಜಾಮ್ ಅಂಜೀರ್
ತುಮಕೂರ್ ಹಲಸು
ಧಾರವಾಡದ ಆಪೂಸು
ಮಲೆನಾಡಿನ ಅನಾನಸು

ಸವಿಯಿರಿ ಬಗೆಬಗೆ ಹಣ್ಣುಗಳ
ಕನ್ನಡ ನಾಡಿನ ಹಣ್ಣುಗಳ ||

- ಕಯ್ಯಾರ ಕಿಞ್ಞಣ್ಣ ರೈ (Kayyar Kinhanna Rai).
ಕಯ್ಯಾರ ಕಿಞ್ಞಣ್ಣ ರೈ (Kayyar Kinhanna Rai) in Wikipedia.